ಮಂಡ್ಯ: ನಾಗಮಂಗಲದಲ್ಲಿ ಶಾಂತಿಯುತವಾಗಿ ಗಣಪತಿ ಮೆರವಣಿಗೆ ಮಾಡುತ್ತಿದ್ದರು. ಪೂರ್ವ ನಿಯೋಜಿತವಾಗಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ್ಯ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಇಷ್ಟೆಲ್ಲಾ ಘಟನೆ ಆಗುತ್ತಿದ್ದರೂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ. ಕಾಂಗ್ರೆಸ್ ಶಾಸಕರೇ ಮುಂದಿನ ದಿನಗಳಲ್ಲಿ ನಿಮ್ಮ ಮನೆಗಳಿಗೂ ಈ ದೇಶ ದ್ರೋಹಿಗಳು ನುಗ್ಗುತ್ತಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:ನಾಗಮಂಗಲ ಗಲಭೆಗೆ ಕಾಂಗ್ರೆಸ್ ಪ್ರಚೋದನೆ; ಆರ್.ಅಶೋಕ್
ಅಂಗಡಿಗಳಿಗೆ ಬೆಂಕಿ ಹಾಕಿ ನಾಶ ಮಾಡಿದ್ದಾರೆ. ದೇಶ ದ್ರೋಹಿಗಳು ಅಶಾಂತಿ ವಾತಾವರಣ ನಿರ್ಮಾಣ ಮಾಡಿದ್ದಾರೆ. ಕೆರಗೋಡಿನಲ್ಲೂ ಹನುಮಧ್ವಜ ಇಳಿಸಿದ್ದರು. ಮಂಡ್ಯ ಜಿಲ್ಲೆ ರೈತರ ಹೋರಾಟಕ್ಕೆ ಹೆಸರಾಗಿತ್ತು.
ಇದೀಗ ಕೋಮುಗಲಭೆಯ ಮೂಲಕ ಹೆಸರಾಗುತ್ತಿದೆ ಎಂದರು.
ಬಂಧಿತ ಹಿಂದೂಗಳನ್ನು ಬಿಡುಗಡೆ ಮಾಡಬೇಕು. ದೇಶ ದ್ರೋಹಿಗಳಿಗೆ ಶಿಕ್ಷೆ ನೀಡಬೇಕು. ಕಾಂಗ್ರೆಸ್ ಸರ್ಕಾರ ಗಲಭೆಕೋರರಿಗೆ ಬೆಂಬಲ ನೀಡುತ್ತಿದೆ. ಅದೇ ಕಾರಣಕ್ಕೆ ರಾಜ್ಯದಲ್ಲಿ ಗಲಭೆಗಳು ಆಗುತ್ತಿವೆ ಎಂದರು.