ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಟಿವಿ ವಿಚಾರವಾಗಿ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ. ಜೈಲಿನ ಅಧಿಕಾರಿಗಳಿಂದ ವಾರ್ನಿಂಗ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಗಮನಿಸಿ: ಸಿಬಿಐ, ಪೊಲೀಸರ ಹೆಸರಲ್ಲಿ ₹2.6 ಕೋಟಿ ವಂಚನೆ; ನಾಲ್ವರ ಬಂಧನ
ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಟಿವಿಗಾಗಿ ಮಾಡುತ್ತಿರುವ ಕಿರಿಕಿರಿ ಮಾಡುತ್ತಿರುವುದಕ್ಕೆ ಜೈಲು ಅಧಿಕಾರಿಗಳು ದರ್ಶನ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಅನುಭವಿಸಿದ್ದ ದರ್ಶನ್, ಬಳ್ಳಾರಿ ಜೈಲಿನಲ್ಲಿ ಸೆಲ್ನ ಕಸ ಗುಡಿಸಿ, ಶೌಚಾಲಯ ಸ್ವಚ್ಛಗೊಳಿಸುವ ಕೆಲಸವನ್ನು ತಾವೇ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.
ಸೆಲ್ನಲ್ಲಿ ಕಸ ಗುಡಿಸುವುದು, ಬಟ್ಟೆ ತೊಳೆಯುವುದು, ಶೌಚಾಲಯ ಸ್ವಚ್ಛತೆ ಎಲ್ಲವನ್ನೂ ಅವರೇ ಮಾಡಿಕೊಳ್ಳುತ್ತಿದ್ದಾರೆ. ಜೈಲಿನ ನಿಯಮದ ಪ್ರಕಾರ ಶೌಚಾಲಯವನ್ನು ವಾರಕ್ಕೊಮ್ಮೆ ಜೈಲಿನ ಸ್ವಚ್ಛತಾ ಕೆಲಸಗಾರರು ಬಂದು ಸ್ವಚ್ಛ ಮಾಡುತ್ತಾರೆ.
ಉಳಿದ ದಿನ ಸೆಲ್ನಲ್ಲಿರುವ ಆರೋಪಿಗಳೇ ಕ್ಲೀನ್ ಮಾಡಿಕೊಳ್ಳಬೇಕು. ಹಾಗಾಗಿ ದರ್ಶನ್ ತಮ್ಮ ಸೆಲ್ನಲ್ಲಿ ತಾವೇ ಕಸ ಗುಡಿಸಿಕೊಂಡು ಸ್ವಚ್ಛತಾ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.