Wednesday, October 2, 2024

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರೀ ಬಸ್ ದುರಂತ

ಧಾರವಾಡ : ಬಸ್​ನ ಮುಂದಿನ ಚಕ್ರ ಏಕಾಏಕಿ ಕಳಚಿ ಬಿದ್ದ ಸ್ವಲ್ಪದರಲ್ಲಿಯೇ ಭಾರೀ ಅನಾಹುತವೊಂದು ತಪ್ಪಿದೆ.

ಧಾರವಾಡ ಕಡೆಯಿಂದ ನವಲಗುಂದಕ್ಕೆ ಹೊರಟಿದ್ದ ಬಸ್​ನಲ್ಲಿ ಈ ಅವಘಡ ಸಂಭವಿಸಿದ್ದು, ಜಿಲ್ಲೆಯ ನವಲಗುಂದ ತಾಲ್ಲೂಕಿನ ನವಲಗುಂದ ಘಟಕಕ್ಕೆ ಸೇರಿದ ಸಾರಿಗೆ ಬಸ್ ಆಗಿದ್ದು. ಚಲಿಸುತ್ತಿದ್ದ ಬಸ್​ನ ಮುಂದಿನ ಚಕ್ರ ಕಳಚಿದೆ. ತಕ್ಷಣ ಎಚ್ಚೆತ್ತ ಚಾಲಕ ಶರೀಫ್ ಹಂಚಿನಾಳ ಬಸ್​ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡು ರಸ್ತೆ ಪಕ್ಕ ನಿಲ್ಲಿಸುವ ಮೂಲಕ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.

ನೆನ್ನೆ (ಸೆ.30) ಮಂಡ್ಯದಲ್ಲಿ ಚಲಿಸುತ್ತಿದ್ದ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ನಡು ರಸ್ತೆಯಲ್ಲಿಯೇ ಉರುಳಿ ಬಿದ್ದು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದು ಮಾಸುವ ಮುನ್ನ ಈ ಘಟನೆ ನಡೆದಿರುವು ಆಘಾತಕ್ಕೆ ಕಾರಣವಾಗಿದೆ

RELATED ARTICLES

Related Articles

TRENDING ARTICLES