Saturday, October 5, 2024

ಕನ್ನಡದ ಪ್ರಖ್ಯಾತ ರಿಯಾಲಿಟಿ ಶೋ BIGG BOSS ಸ್ಥಗಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ ವಕೀಲ

ಬೆಂಗಳೂರು :  ಕನ್ನಡ ಮಾಧ್ಯಮ ಲೋಕದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ 11 ಸೀಸನ್ ನ 14ನೇ ಸ್ಪರ್ಧಿ ಚೈತ್ರ ಕುಂದಾಪುರ ರವರನ್ನು ತಕ್ಷಣ ಶೋ ನಿಂದ ಹೊರಗೆ ಹಾಕಬೇಕು ಇಲ್ಲವಾದಲ್ಲಿ colors ಕನ್ನಡ ತಂಡದ ವಿರುದ್ಧ ಉಚ್ಛ ನ್ಯಾಯಾಲಯದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ವಕೀಲ ಕೆ.ಎಲ್. ಭೋಜರಾಜ್ ತಿಳಿಸಿದ್ದಾರೆ.

ಕನ್ನಡ ಮಾಧ್ಯಮ ಲೋಕದ ಬಹು ದೊಡ್ಡ ರಿಯಾಲಿಟಿ ಶೋ ಹಾಗೂ ಕನ್ನಡ ಚಿತ್ರರಂಗದ ಮೇರು ನಟ ಕಿಚ್ಚ ಸುದೀಪ್ ನಡೆಸಿಕೊಡುವ ರಿಯಾಲಿಟಿ ಶೋ ಅತ್ಯಂತ ಜನಪ್ರಿಯ ಕಾರ್ಯಕ್ರಮವಾಗಿದೆ. ಬಿಗ್ ಬಾಸ್ 11ರ ಸೀಜನ್ ಸೆಪ್ಟೆಂಬರ್ 29 ರಂದು ಪ್ರಾರಂಭಗೊಂಡಿದ್ದು ರಿಯಾಲಿಟಿ ಶೋನಲ್ಲಿ 17 ಸ್ಪರ್ಧಿಗಳು ಭಾಗವಹಿಸಿದ್ದಾರೆ.

ಅದರಲ್ಲಿ 14ನೇ ಸ್ಪರ್ಧಿಯಾಗಿ ಕುಂದಾಪುರದ ಚೈತ್ರ ಸ್ಪರ್ಧಿಯಾಗಿ ಬಂದಿದ್ದು ಅವರ ವಿರುದ್ಧ ವಿವಿಧ ಪೋಲಿಸ್ ಠಾಣೆಗಳಲ್ಲಿ ಕೇಸುಗಳನ್ನು ದಾಖಲಿಸಲಾಗಿದೆ. ಒಟ್ಟು 11 ಕೇಸುಗಳು ದಾಖಲಾಗಿರುವ ಚೈತ್ರ ಕುಂದಾಪುರ ಬಿಗ್ ಬಾಸ್ ಗೆ ಬಂದಿರುವುದು ಒಳ್ಳೆಯದಲ್ಲ. ತಕ್ಷಣ ಕಲರ್ಸ್ ಕನ್ನಡದ ತಂಡ ಚೈತ್ರ ಕುಂದಾಪುರ ರವರನ್ನು ಹೊರಕ್ಕೆ ಹಾಕಬೇಕು ಎಂದು ಈಗಾಗಲೇ ನೋಟಿಸ್ ನೀಡಲಾಗಿದೆ ,

ಒಂದು ವೇಳೆ ಇನ್ನು ಎರಡು ಮೂರು ದಿನಗಳಲ್ಲಿ ನಮ್ಮ ನೋಟಿಸ್ ಗೆ ಉತ್ತರ ನೀಡದೆ ಇದ್ದಲ್ಲಿ ಹೈಕೋರ್ಟ್ ಹಾಗೂ ಸ್ಥಳೀಯ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿ ಬಿಗ್ ಬಾಸ್ ಹನ್ನೊಂದರ ಸೀಸನ್ ಸ್ಥಗಿತ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

 

RELATED ARTICLES

Related Articles

TRENDING ARTICLES