ರಾಮನಗರ : ಚನ್ನಪಟ್ಟಣದಲ್ಲಿ ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್. ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಹುಲುವಾಡಿ ಗ್ರಾಮದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್ ನಾವು ಅಭ್ಯರ್ಥಿ ಬಗ್ಗೆ ಯೋಚನೆ ಮಾಡ್ತಿಲ್ಲ, ಅಭಿವೃದ್ಧಿ ಬಗ್ಗೆ ಚಿಂತನೆ ಮಾಡ್ತಿದ್ದೇವೆ. ಎಂದರು.
ಚೆನ್ನಪಟ್ಟಣದಲ್ಲಿ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಡಿಕೆಶಿ. ತಮ್ಮ ಅಭಿವೃದ್ದಿ ಕಾರ್ಯದ ಬಗ್ಗೆ ವಿವರಿಸಿದರು. ನಾವು ಚೆನ್ನಪಟ್ಟಣಕ್ಕೆ 300 ಕೋಟಿ ಅನುದಾನ ನೀಡಿದ್ದು, ಪ್ರತಿ ಗ್ರಾಮ ಪಂಚಾಯಿತಿಗೆ 2 ರಿಂದ 6 ಕೋಟಿ ಅನುದಾನ ನೀಡಿದ್ದೇವೆ. ಸುಮಾರು 5000 ಸಾವಿರ ಮನೆಗಳನ್ನು ಕಟ್ಟಿಕೊಟ್ಟಿದ್ದೇವೆ. ನಾವ್ಯಾರು ಚುನಾವಣೆ ಬಗ್ಗೆ ಯೋಚಿಸುತಿಲ್ಲ, ಕೆಲಸ ಮಾಡುತ್ತಿರುವ ಪ್ರತಿಯೊಬ್ಬ ಕಾರ್ಯಕರ್ತರಿಗೆ ನಾನೇ ಈ ಕ್ಷೇತ್ರದ ಅಭ್ಯರ್ಥಿ ಎಂದು ತಿಳಿದು ಕಾರ್ಯ ನಿರ್ವಹಿಸಿ ಎಂದು ಹೇಳಿದ್ದೇನೆ ಎಂದರು.
ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಎಫ್ಐಆರ್ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ಅದು ಅವರ ವೈಯಕ್ತಿಕ ವಿಚಾರ ಎಂದು. ನಾನು ಅದರಲ್ಲಿ ಬಾಯಿ ಹಾಕುವುದಿಲ್ಲಎಂದು ಹೇಳಿದರು.