ಗದಗ : ಸರಿಯಾದ ಸಮಯಕ್ಕೆ ಬಸ್ ಬಿಡುವಂತೆ ಆಗ್ರಹಿಸಿ ABVP ಸಂಘಟನೆಯ ವಿಧ್ಯಾರ್ಥಿಗಳು ಪ್ರತಿಭಟನೆ ಮಾಡಿದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಬಸ್ ಬರದೆ ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಿಧ್ಯಾರ್ಥಿಗಳು ಆಕ್ರೋಶ ವ್ಯಕ್ತ ಪಡಿಸಿದರು.
ಶಕ್ತಿ ಯೋಜನೆಯ ಪರಿಣಾಮವಾಗಿ ಬಸ್ಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಇದರಿಂದಾಗಿ ಶಾಲಾ ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ . ಇದರ ಕುರಿತಾಗಿ ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರು ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ. ನಮ್ಮ ಮನವಿಗೂ ಸಹ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಪ್ರತಿಭಟನನಿರತ ವಿಧ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುಧ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ವಿಧ್ಯಾರ್ಥಿಗಳ ಪ್ರತಿಭಟನೆಯಿಂದ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಯಿತು. ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಸಾರಿಗೆ ಅಧಿಕಾರಿಗಳು ಹೆಚ್ಚುವರಿ ಬಸ್ಗಳನ್ನು ಬಿಟ್ಟಿದ್ದಾರೆ.
.