ಕೊಪ್ಪಳ : ಜಿಲ್ಲೆಯ ಮರಕುಂಬಿ ಗ್ರಾಮದ ದಲಿತರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣ ಇಂದು 102 ಆರೋಪಿಗಳ ವಿರುದ್ಧ ಶಿಕ್ಷೆ ಪ್ರಕಟಣೆಯಾಗಿದ್ದು ಕೊಪ್ಪಳ ಜಿಲ್ಲಾ ಕೋರ್ಟ್ ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ
ಕೊಪ್ಪಳದ ಕಾರಗೃಹದಿಂದ ನಾಲ್ಕು ಪೊಲೀಸ್ ವಾಹನ ಒಂದು ಕೆಎಸ್ ಆರ್ ಟಿಸಿ ಬಸ್ನಲ್ಲಿ ಇಂದು ಪೋಲಿಸರು ಕೊಪ್ಪಳ ನ್ಯಾಯಲಯಕ್ಕೆ ಕರೆತಂದಿದ್ದರು.
9 ವರ್ಷಗಳ ನಂತರ 102 ತಪ್ಪಿತಸ್ಥರ ವಿರುದ್ದ ಆರೋಪ ಸಾಬೀತಾಗಿದ್ದು ಈ ಹಿನ್ನೆಲೆ 102 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.ಇಂದು ಅಕ್ಟೋಬರ್ 24 ಕ್ಕೆ ಶಿಕ್ಷೆ ತೀರ್ಪು ಪ್ರಕಟಿಸಿದ್ದು. ಇಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
2014- 2015 ರಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ಸರ್ವಣಿಯರು ದಲಿತರ ಹೋಟೆಲ್, ಕೇರಿಯನ್ನು ದ್ವಂಸಗೊಳಿಸಿದ್ದರು. ಅದರ ಜೊತೆಗೆ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರಿಂದ ಇದು ದೊಡ್ಡ ಪ್ರಕರಣವಾಗಿ ರಾಜ್ಯದಲ್ಲಿಯೇ ಸದ್ದು ಮಾಡಿದ್ದ ದಲಿತ ದೌರ್ಜನ್ಯ ಪ್ರಕರಣವಾಗಿತ್ತು. ಈ ಕುರಿತು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ 117 ಜನರ ವಿರುದ್ದ ದೂರು ದಾಖಲಾಗಿತ್ತು. ಈ 117 ಜನರಲ್ಲಿ ಕೆಲ ಆರೋಪಿಗಳು ಸಾವನ್ನಪ್ಪಿದ್ದು ಇಂದು 101 ಜನರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ಸಂಜೆ 6 ಗಂಟೆಗೆ ನ್ಯಾಯಾಲಯದಿಂದ ತೀರ್ಪು ಪ್ರಕಟವಾಗಿದ್ದು ಬರೊಬ್ಬರಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು. ಉಳಿದ 3 ಅಪರಾಧಿಗಳಿಗೆ ತಲಾ 5 ವರ್ಷಗಳ ಶಿಕ್ಷೆಯನ್ನು ವಿಧಿಸಿ ಕೊಪ್ಪಳ ಜಿಲ್ಲಾ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ.