ಆನೇಕಲ್ : ಪತ್ನಿಯ ಶೀಲ ಶಂಕಿಸದ ಪಾಪಿ ಪತಿ ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ಅನೇಕಲ್ನಲ್ಲಿ ನಡೆದಿದ್ದು. ಕೊಲೆಯಾದ ದುರ್ದೈವಿಯನ್ನು 29 ವರ್ಷದ ಶ್ರೀಗಂಗಾ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಮೋಹನ್ ರಾಜು ಎಂದು ಗುರುತಿಸಲಾಗಿದೆ.
ಅನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ಘಟನೆ ನಡೆದಿದ್ದು. ಮಗುವನ್ನು ಶಾಲೆಗೆ ಬಿಡಲು ಬಂದಿದ್ದ ಪತ್ನಿ ಮೇಲೆ ಪತಿ ಅಟ್ಯಾಕ್ ಮಾಡಿದ್ದು, ಚಾಕುವಿನಿಂದ ಹಿರಿದು ಕೊಲೆ ಮಾಡಿದ್ದಾನೆ. ಶ್ರೀ ಗಂಗಾ ಮತ್ತು ಮೋಹನ್ ರಾಜು ಕಳೆದ 7 ವರ್ಷಗಳ ಹಿಂದೆ ಮದುವೆಯಾಗಿದ್ದರು. ಇವರಿಬ್ಬರಿಗೆ 6 ವರ್ಷದ ಮಗನೂ ಇದ್ದಾನೆ. ಆದರೆ ಮೋಹನ್ ರಾಜುಗೆ ಕಳೆದ ಎರಡ್ಮೂರು ವರ್ಷಗಳಿಂದ ಪತ್ನಿಯ ಶೀಲ ಶಂಕಿಸಿ ಜಗಳ ಮಾಡುತ್ತಿದ್ದನು.
ಇದನ್ನೂ ಓದಿ:ವಿಜಯೇಂದ್ರನ ವಿರುದ್ದ ತನಿಖೆ ಮಾಡಲು ಸಿದ್ದರಾಮಯ್ಯಗೆ ಏನ್ ದಾಡಿ: ಯತ್ನಾಳ್
ಮೋಹನ್ ರಾಜು ಸ್ನೇಹಿತನೊಂದಿಗೆ ಶ್ರೀ ಗಂಗಾ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಅನೇಕ ಬಾರಿ ಪತಿ ಹೆಂಡತಿಯೊಂದಿಗೆ ಜಗಳ ಮಾಡಿದ್ದನು. ಇದೇ ವಿಚಾರಕ್ಕೆ ಕಳೆದ 8 ತಿಂಗಳಿಂದ ಪತಿ ಪತ್ನಿ ಇಬ್ಬರು ದೂರವಿದ್ದರು. ಆದರೆ ನಿನ್ನೆ ರಾತ್ರಿ ಮಗುವನ್ನು ನೋಡಲು ಎಂದು ಮೋಹನ್ ರಾಜು ಪತ್ನಿಯ ಮನೆಗೆ ಬಂದಿದ್ದನು. ಈ ವೇಳೆ ಇಬ್ಬರ ನಡುವೆ ಜಗಳವಾಗಿದೆ.
ಇಂದು ಬೆಳಿಗ್ಗೆ ಶ್ರೀ ಗಂಗಾ ಮಗುವನ್ನು ಬೈಕ್ನಲ್ಲಿ ಶಾಲೆಗೆ ಬಿಡಲು ಕರೆದುಕೊಂಡು ಬಂದಿದ್ದಳು. ಈ ವೇಳೆ ಕಾದು ಕುಳಿತ್ತಿದ್ದ ಪಾಪಿ ಪತಿ ಶ್ರೀ ಗಂಗಾ ಮೇಲೆ ಅಟ್ಯಾಕ್ ಮಾಡಿದ್ದು. ನಡುರಸ್ತೆಯಲ್ಲೆ ಪತ್ನಿಯ ಮೇಲೆ ಏಳೆಂಟು ಬಾರಿ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ನಾರಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಿದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಹೆಬ್ಬಗೋಡಿ ಪೊಲೀಸರು ಆರೋಪಿ ಮೋಹನ್ ರಾಜುರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.