ಶಿವಮೊಗ್ಗ : ರಸ್ತೆಯಲ್ಲಿ ದಿಡೀರ್ ಎಂದು ಅಡ್ಡ ಬಂದ ಜಿಂಕೆಯನ್ನು ತಪ್ಪಿಸಲು ಹೋಗಿ ಕೆಲಗೆ ಬಿದ್ದ ಬೈಕ್ ಸವಾರನೋರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು. ಮೃತ ಸವಾರನನ್ನು 46 ವರ್ಷದ ಸತೀಶ್ ಎಂದು ಗುರುತಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ, ಹಾಯಾ ಗ್ರಾಮದ ಶನೈಶ್ಚರ ದೇವಾಲಯದ ಬಳಿ ಘಟನೆ ನಡೆದಿದ್ದು. ರಸ್ತೆಯಲ್ಲಿ ದಿಢೀರ್ ಅಡ್ಡ ಬಂದ ಜಿಂಕೆಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬೈಕ್ ಅಪಘಾತವಾಗಿದೆ. ಬೈಕ್ ಮೇಲಿದ್ದ ಸತೀಶ್ ಕೆಳಗೆ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದನು. ಕೂಡಲೇ ಆತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದರು ಕೂಡ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :ನಗರವಾಸಿಗಳಿಗೆ ಮತ್ತೊಂದು ಶಾಕ್: ಮೆಟ್ರೋ ಟಿಕೆಟ್ ದರದಲ್ಲಿ ಭಾರೀ ಏರಿಕೆ
ಹಾಯಾ ಗ್ರಾಮದಿಂದ ರಾತ್ರಿ 12 ಗಂಟೆಗೆ ತಮ್ಮೂರು ಕುಪ್ಪಗಡ್ಡೆಗೆ ಹಿಂತಿರುಗುತ್ತಿದ್ದ ವೇಳೆ ದುರ್ಘಟನೆ ನಡೆದಿದ್ದು. ತಲೆಗೆ ಗಂಭೀರವಾಗಿ ಗಾಯಗೊಂಡ ಸತೀಶ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಸೊರಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.