ವಿಜಯಪುರ : ಪ್ರವಾದಿ ಮಹಮ್ಮದ್ರ ಕುರಿತ ಅವಹೇಳನಕಾರಿ ಹೇಳಿಕೆ ನೀಡದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ರ ಮೇಲೆ ವಿಜಯಪುರದಲ್ಲಿ ಪ್ರಕರಣ ದಾಖಲಾಗಿದ್ದು. ಮೊಹಮ್ಮದ್ ಹನ್ನಾನ್ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಕಳೆದ ಏಪ್ರಿಲ್ 7 ರಂದು ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಯತ್ನಾಳ್. ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ರ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದ್ದು. ದಿವಂಗತ ಬಾಳಾಸಾಹೇಬ್ ಠಾಕ್ರೆ ಮನೆಯಲ್ಲಿ ಮಹಮ್ಮದ ಪೈಗಂಬರ್ ಹುಟ್ಟಿದ್ದಾನೆ ಎಂದು ಹೇಳಿದ್ದರು. ಈ ಮಾತಿನಿಂದ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ ಎಂದು ದೂರು ನೀಡಲಾಗಿದೆ.
ಇದನ್ನೂ ಓದಿ :ಪೈಶಾಚಿಕ ಕೃತ್ಯ; 16 ವರ್ಷದ ಮಗಳ ಮೇಲೆ ತಂದೆಯಿಂದ ನಿರಂತರ ಅತ್ಯಾಚಾರ
ವಿಜಯಪುರ ನಗರದ ಮೊಹಮ್ಮದ್ ಹನ್ನಾನ್ ಎಂಬುವವರಿಂದ ದೂರು ದಾಖಲು. ಯತ್ನಾಳ್ ಹೇಳಿಕೆ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರೋ ಸಾಧ್ಯತೆ ಇದೆ ಎಂದು ದೂರುದಾರ ದೂರಿದ್ದಾನೆ. ದೂರಿನನ್ವಯ ಗೋಲ್ಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.