Saturday, April 19, 2025

17 ವರ್ಷಗಳ ನಂತರ ಉಗ್ರ ಜಂತು ತಹವೂರ್​ ರಾಣಾ ಭಾರತಕ್ಕೆ ಹಸ್ತಾಂತರ

2008ರ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಕೊನೆಗೂ ಭಾರತಕ್ಕೆ ಬಂದಿಳಿದಿದ್ದಾನೆ. ದೆಹಲಿಯ ಪಾಲಂ ಏರ್​ಬೇಸ್​ಗೆ ಉಗ್ರಜಂತು ತಹವೂರ್​ ರಾಣನನ್ನು ಹೊತ್ತುತಂದ ವಿಶೇಷ ವಿಮಾನ ಆಗಮಿಸಿದ್ದು. ಎನ್​ಐಎ ಅಧಿಕಾರಿಗಳು ಈತನನ್ನು ಅರೆಸ್ಟ್​ ಮಾಡಿದ್ದಾರೆ.

ಎನ್‌ಐಎ ಮತ್ತು ರಾ ಅಧಿಕಾರಿ ತಂಡಗಳ ಬಿಗಿ ಭದ್ರತೆಯೊಂದಿಗೆ ವಿಶೇಷ ವಿಮಾನದಲ್ಲಿ ದೆಹಲಿಯ ಪಾಲಂ ಏರ್​ಬೇಸ್​ನ ಟರ್ಮಿನಲ್‌ 1ನಲ್ಲಿ ಬಂದಿಳಿದಿದ್ದಾನೆ. ಇಲ್ಲಿಂದ ಅವನನ್ನ ಎನ್‌ಐಎ ಕೇಂದ್ರ ಕಚೇರಿಗೆ ಕರೆದೊಯ್ಯಲು ವಿಶೇಷ ಬುಲೆಟ್‌ ಪ್ರೂಫ್‌ ವಾಹನ ಸಿದ್ಧವಾಗಿದೆ. ಈತನನ್ನು ಮೊದಲಿಗೆ ನ್ಯಾಯಾಲಯಕ್ಕೆ ಹಾಜರು ಪಡಿಸಿ ನಂತರ ಆತನನ್ನು ಕಸ್ಟಡಿಗೆ ಪಡೆಯಲಾಗುತ್ತದೆ. ಈತನಿಗಾಗಿ ತಿಹಾರ್​ ಜೈಲಿನಲ್ಲಿ ವಿಶೇಷ ಭದ್ರತೆಗಳೊಂದಿಗೆ ಕಸ್ಟಡಿಯನ್ನು ಸಿದ್ದಪಡಿಸಿದ್ದು. ಈತನ ವಿಚಾರಣೆ ಅಲ್ಲಿಯೇ ನಡೆಯಲಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ :ಒಲಂಪಿಕ್​ ಕ್ರೀಡಾಕೂಟಕ್ಕೆ ಮೊದಲ ಬಾರಿಗೆ ಕ್ರಿಕೆಟ್​ ಸೇರ್ಪಡೆ; ಕೇವಲ 6 ತಂಡಗಳಿಗಷ್ಟೆ ಅವಕಾಶ

ಯಾರೂ ಈ ತಹವೂರ್​ ರಾಣ ?

ತಹವ್ವೂರ್ ರಾಣಾ ಹುಟ್ಟಿದ್ದು ಪಾಕಿಸ್ತಾನದಲ್ಲಿ. ಆರ್ಮಿ ಮೆಡಿಕಲ್ ಕಾಲೇಜಿನಲ್ಲ ಅಧ್ಯಯನ ಮಾಡಿದ ರಾಣಾ, ಪಾಕಿಸ್ತಾನದ ಸೇನೆಯಲ್ಲಿ 10 ವರ್ಷಗಳ ಕಾಲ ವೈದ್ಯನಾಗಿ ಕೆಲಸ ಮಾಡಿದ್ದ. ಈ ಕೆಲಸ ಇಷ್ಟವಾಗದೇ ಸೇನೆ ತೊರೆದ ರಾಣಾ, ಭಾರತದ ವಿರುದ್ಧ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದ. ಸದ್ಯ ರಾಣಾ ಕೆನಡಾ ಮೂಲದ ಉದ್ಯಮಿ.

ರಾಣಾ ನವೆಂಬರ್ 11 ಮತ್ತು 21, 2008 ರ ನಡುವೆ ದುಬೈ ಮೂಲಕ ಮುಂಬೈಗೆ ಬಂದಿದ್ದ. ಪೊವೈನಲ್ಲಿರುವ ಹೋಟೆಲ್ ರಿನೈಸಾನ್ಸ್‌ನಲ್ಲಿ ತಂಗಿ ದಾಳಿಗೆ ಬೇಕಾದ ಸಿದ್ಧತೆ ಪರಿಶೀಲಿಸಿದ್ದ. ಈತ ದುಬೈಗೆ ಹೋದ 5 ದಿನಗಳ ಬಳಿಕ ದಾಳಿ ನಡೆದಿತ್ತು. ಭಾರತವು ಜೂನ್ 2020 ರಲ್ಲಿ ರಾಣಾನನ್ನು ಗಡಿಪಾರಿಗಾಗಿ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಈ ವರ್ಷದ ಫೆಬ್ರವರಿಯಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಣಾನನ್ನು ಗಡಿಪಾರು ಮಾಡಲಾಗುವುದು ಎಂದು ದೃಢಪಡಿಸಿದ್ದರು.

 

RELATED ARTICLES

Related Articles

TRENDING ARTICLES