Wednesday, April 23, 2025

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್; ತಪ್ಪಿತು ಭಾರೀ ದುರಂತ

ಬಾಗಲಕೋಟೆ : ಚಾಲಕ ನಿಯಂತ್ರಣ ಕಳೆದುಕೊಂಡ ಸಾರಿಗೆ ಬಸ್​ ಕಂದಕಕ್ಕೆ ಉರುಳಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು. ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಸೇತುವೆ ಬಳಿ ದುರ್ಘಟನೆ ಸಂಭವಿಸಿದ್ದು. ಅಥಣಿಯಿಂದ ಜಮಖಂಡಿ ಕಡೆಗೆ ಬರುತ್ತಿದ್ದ KA-23-F-6783 ನಂಬರ್‌ನ ಕೆಎಸ್​ಆರ್​ಟಿಸಿ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.

ಇದನ್ನೂ ಓದಿ :ಜನಾಕ್ರೋಶ ಯಾತ್ರೆಗೆ ಜನರ ಬೆಂಬಲ ಇಲ್ಲ; ವಿಜಯೇಂದ್ರ ವಿರುದ್ದ ಯತ್ನಾಳ್​ ವಾಗ್ದಾಳಿ

ಅಪಘಾತದಲ್ಲಿ ಬಸ್​ನಲ್ಲಿದ್ದ ಏಳೆಂಟು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು. ಸ್ಥಳೀಯರು ಬಸ್​ನ ಹಿಂಬದಿಯ ಗಾಜು ಒಡೆದು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದು. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರೋಡ್​ ಬ್ರೇಕರ್​ ದಾಟಿಸುವಾಗ ಬಸ್ಸಿನ ಪಾಟಾ ಮುರಿದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

RELATED ARTICLES

Related Articles

TRENDING ARTICLES