ಜಮ್ಮು&ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿರುವ ಉಗ್ರರ ದಾಳಿಯ ಬಗ್ಗೆ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಆಕ್ರೋಶ ವ್ಯಕ್ತಪಡಿಸಿದ್ದು. ಇದು ಸಂಯಮದಿಂದ ಕುಳಿತುಕೊಳ್ಳುವ ಸಮಯದವಲ್ಲ, ಇದು ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆ ನೀಡುವ ಸಮಯ ಎಂದು ಹೇಳಿದರು.
ಘಟನೆ ಕುರಿತು ನಟ ಸುದೀಪ್ ಎಕ್ಷ್ ಖಾತೆಯಲ್ಲಿ ಬರೆದುಕೊಂಡಿದ್ದು. ‘ಪಹಲ್ಗಾಮ್ನಲ್ಲಿ ಅಮಾಯಕರ ನೆತ್ತರು ಹರಿಸಲಾಗಿದೆ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ. ದೇಶದ ಶಕ್ತಿಯ ಮೇಲೆ ಮಾಡಲಾದ ದಾಳಿ. ಇದು ಸುಮ್ಮನಿರುವ ಸಮಯವಲ್ಲ. ಈ ಘಟನೆಗೆ ಪ್ರತಿಕ್ರಿಯೆ ಕೊಡಲೇಬೇಕು. ಈ ಹೀನ ಕೃತ್ಯದಲ್ಲಿ ಪಾಲ್ಗೊಂಡವರ ವಿರುದ್ಧ ತಕ್ಷಣ ಕ್ರಮ ವಹಿಸಿ ಅಂತಾ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ, ರಾಜನಾಥ್ ಸಿಂಗ್ಗೆ ಎಕ್ಸ್ನಲ್ಲಿ ಮೂಲಕ ಸುದೀಪ್ ಮಾಡಿದ್ದಾರೆ.
ಇದನ್ನೂ ಓದಿ :ದೇಶದಲ್ಲಿ ಮುಸ್ಲಿಂರಿಗೆ ತೊಂದರೆಯಾಗುತ್ತಿದೆ, ಅದಕ್ಕೆ ದಾಳಿ ಮಾಡಿದ್ದಾರೆ: ರಾರ್ಬಟ್ ವಾದ್ರ
The brutal attack on innocent tourists in Pahalgam is heart-wrenching. This is not just an assault on individuals but on the spirit of our nation.
This is not the time for restraint, it’s time for a strong and clear response.
I urge @narendramodi
Ji, @AmitShah ji and DM…— Kichcha Sudeepa (@KicchaSudeep) April 23, 2025
ಇನ್ನು ಘಟನೆ ಬಗ್ಗೆ ನಟ ಯಶ್, ಶಿವರಾಜ್ಕುಮಾರ್, ರಷ್ಮಿಕಾ ಮಂದಣ್ಣ, ಅನುಷ್ಕಾ ಶರ್ಮ ಸೇರಿದಂತೆ ಹಲವರು ಖಂಡನೆ ವ್ಯಕ್ತಪಡಿಸಿದ್ದು. ಕ್ರಿಕೆಟಿಗರು, ನಟ-ನಟಿಯರು ಸೇರಿದಂತೆ ಇಡೀ ರಾಷ್ಟ್ರವೇ ಪಹಲ್ಗಾಮ್ನಲ್ಲಿ ನಡೆದಿರುವ ಹೀನಾ ಕೃತ್ಯಕ್ಕೆ ಖಂಡನೆ ವ್ಯಕ್ತಪಡಿಸಿವೆ.