ಲಾಹೋರ್: ಜಮ್ಮು ಕಾಶ್ಮೀರದ ಪಹಲ್ಗಾಂನಲ್ಲಿ ಸಂಭವಿಸಿದ ಉಗ್ರ ದಾಳಿಯಲ್ಲಿ 28 ಪ್ರವಾಸಿಗರು ಸಾವನ್ನಪ್ಪಿದ್ದು. ಈ ಘಟನೆಗೆ ಭಾರತದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಲಾಕೋಟ್ ಏರ್ಸ್ಟ್ರೈಕ್ ಮಾದರಿಯ ಪ್ರತಿಕಾರ ತೀರಿಸಿಕೊಳ್ಳಬೇಕು ಎಂಬ ಕೂಗುಗಳು ಕೇಳಿ ಬರುತ್ತಿದೆ. ಈ ಕುರಿತು ಪಾಕ್ನ ಸಚಿವೆ ಹೇಳಿಕೆ ನೀಡಿದ್ದು, ಪ್ರತಿಕಾರವಾಗಿ ಭಾರತವೇನಾದರೂ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ, ತನ್ನ ಪ್ರತ್ಯುತ್ತರ ನೀಡಲಿದ್ದೇವೆ ಎಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಚಿವೆ ಹೇಳಿದ್ದಾರೆ.
ಭಾರತದಿಂದ ನಡೆಯಬಹುದಾದ ಕಾರ್ಯಚರಣೆಯ ಬಗ್ಗೆ ಭೀತಿಯಲ್ಲಿರುವ ಪಾಕ್ ಭಾರತದ ಗಡಿಗೆ ಹೆಚ್ಚಿನ ಸೇನಾ ಯುದ್ದ ವಿಮಾನಗಳನ್ನು ನಿಯೋಜಿಸುತ್ತಿದೆ. ಇದರ ನಡುವೆ ಪಾಕ್ನ ಪಂಜಾಬ್ ಪ್ರಾಂತ್ಯದ ಸಚಿವೆ ಅಜ್ಮಾ ಬೊಖಾರಿ ಮೊಂಡತನದ ಹೇಳಿಕೆ ನೀಡಿದ್ದು. ‘ ಒಂದು ವೇಳೆ ಸುಳ್ಳು ಆರೋಪದ ಮೇಲೆ ಭಾರತ ಯಾವುದೇ ದುಸ್ಸಾಹಸವನ್ನು ಕೈಗೊಂಡರು, ಅದಕ್ಕೆ ಪ್ರತಿಯಾಗಿ ಭೀಕರ ಪರಿಣಾಮ ಅನುಭವಿಸಬೇಕಾಗುತ್ತದೆ.
ಇದನ್ನೂ ಓದಿ :ಪಹಲ್ಗಾಂನಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ
ಕಳೆದ ಬಾರಿ ಅಭಿನಂದನ್ ವರ್ಧಮಾನ್ ಅವರಿಗೆ ಚಹಾ ನೀಡಿದ್ದೆವು. ಆದರೆ ಈ ಬಾರಿ ಅಷ್ಟು ಕನಿಕರ ತೋರುವುದಿಲ್ಲ. ಅತಿಥಿ ಒಮ್ಮೆ ಬಂದರೆ ಸಹನೀಯ. ಆದರೆ ಪ್ರತಿ ಬಾರಿ ಬಂದರೆ, ಪಾಕಿಸ್ತಾನದ ಸೇನೆ, ಸರ್ಕಾರ ಮತ್ತು ಜನರು ಅವರಿಗೆ ಸರಿಯಾಗಿ ಪಾಠ ಕಲಿಸುತ್ತಾರೆ’ ಎಂದು ಮೊಂಡುತನ ಪ್ರದರ್ಶಿಸಿದ್ದಾರೆ. ಇದನ್ನೂ ಓದಿ :Pahalgam Terror Attack : ಅಮಿತ್ ಶಾ, ಮೋದಿ ಕಡೆ ಬೊಟ್ಟು ಮಾಡಿದ ಪ್ರಿಯಾಂಕ್ ಖರ್ಗೆ
ಇತ್ತ ಭಾರತ ಸಿಂಧೂ ನದಿ ಒಪ್ಪಂದ ರದ್ದುಗೊಳಿಸಿದ ಬೆನ್ನಲ್ಲೇ ಪಾಕಿಸ್ಥಾನ ಸರ್ಕಾರ ಗುರುವಾರ ತುರ್ತು ರಾಷ್ಟ್ರೀಯ ಭದ್ರತಾ ಸಮಿತಿ ಸಭೆ ಕರೆದಿದ್ದು. ಈ ಬಗ್ಗೆ ಮಾತನಾಡಿರುವ ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್, ಪ್ರಧಾನಿ ಶಹಬಾಜ್ ಷರೀಫ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಎಲ್ಲಾ ಇಲಾಖೆಯ ಮುಖ್ಯಸ್ಥರೂ ಭಾಗಿಯಾಗಲಿದ್ದು, ಭಾರತದ ಕ್ರಮಕ್ಕೆ ಸರಿಯಾಗಿ ಉತ್ತರಿಸಲಿದ್ದೇವೆ’ ಎಂದಿದ್ದಾರೆ.