ದೇವನಹಳ್ಳಿ : ಜಮ್ಮು&ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರದಾಳಿಯಿಂದ ಪಾರಾದ ಕನ್ನಡಿಗರು ಸುರಕ್ಷಿತವಾಗಿ ಕರ್ನಾಟಕಕ್ಕೆ ಬಂದಿಳಿದಿದ್ದು. 6E 9198 ನಂಬರ್ನ ಇಂಡಿಗೋ ವಿಮಾನದಲ್ಲಿ 178 ಕನ್ನಡಿಗರು ಕರ್ನಾಟಕಕ್ಕೆ ಬಂದಿಳಿದಿದ್ದಾರೆ. ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಪ್ರವಾಸಿಗರು ಸುರಕ್ಷಿತವಾಗಿ ಬಂದಿಳಿದಿದ್ದಾರೆ.
ಶ್ರೀನಗರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸಾಗಿದ್ದಾರೆ. ಸಮಯ 11:55ಕ್ಕೆ ವಿಶೇಷ ವಿಮಾನ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಿದ್ದು. ಏರ್ಪೋರ್ಟ್ನಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಇದನ್ನೂ ಓದಿ :ಧರ್ಮಕ್ಕಿಂತ ಮಾನವೀಯತೆ ಮುಖ್ಯ, ಖರ್ಗೆ ಸರಿಯಾಗಿ ಹೇಳಿಕೆ ನೀಡಿದ್ದಾರೆ: ಪ್ರಹ್ಲಾದ್ ಜೋಶಿ
ತಕ್ಷಣವೇ ಎಚ್ಚೆತ್ತುಕೊಂಡಿತ್ತು ಕರ್ನಾಟಕ ಸರ್ಕಾರ..!
ಕಾಶ್ಮೀರದಲ್ಲಿ ಮೂವರು ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ತುರ್ತು ನೆರವಿಗೆ ಎಂದು ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಅಧಿಕಾರಗಳನ್ನು ಪಹಲ್ಗಾಮ್ಗೆ ಕಳುಹಿಸಿದ್ದರು.
ವಿಶೇಷ ವಿಮಾನದ ಮೂಲಕ ಕಾಶ್ಮೀರಕ್ಕೆ ತೆರಳಿದ್ದ ಸಂತೋಷ್ ಲಾಡ್ ಅಲ್ಲಿ ಮೃತಪಟ್ಟ ಕನ್ನಡಿಗರ ಪಾರ್ಥಿವಗಳನ್ನು ಕರ್ನಾಟಕಕ್ಕೆ ರವಾನೆ ಮಾಡಲು ಕ್ರಮ ಕೈಗೊಂಡಿದ್ದರು. ಅಲ್ಲಿದ್ದ ಕನ್ನಡಿಗರನ್ನು ಕರ್ನಾಟಕಕ್ಕೆ ಕರೆತರಲು ಕ್ರಮವಹಿಸಿದ್ದರು.