ನವದೆಹಲಿ: ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪಹಲ್ಗಾಮ್ ದಾಳಿಯ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ ‘ಸಂತ್ರಸ್ತರು ದುಃಖಿಸುತ್ತಿರುವ ದೃಶ್ಯಗಳನ್ನು ನೋಡಿದರೆ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ, ಅಪರಾದ ಎಸಗುವವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.
ಮನ್ ಕಿ ಬಾತ್ನ 121ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ‘ಪಹಲ್ಗಾಮ್ ದಾಳಿಯಿಂದ ನನಗೆ ತುಂಬಾ ನೋವಾಗಿದೆ. ಇದು ಭಯೋತ್ಪಾದನೆಯ ಬೆಂಬಲಿಗರ ಹತಾಶೆ ಮತ್ತು ಅವರ ಹೇಡಿತನವನ್ನು ತೋರಿಸುತ್ತದೆ. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಲಿದೆ. ಅಪರಾಧ ಎಸಗಿದವರಿಗೆ, ಬೆಂಬಲಿಗರಿಗೆ, ಸೂತ್ರಧಾರಿಗಳವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗುಡುಗಿದರು. ಇದನ್ನೂ ಓದಿ :‘ತಕ್ಷಣ ಯುದ್ದ ಬೇಡ ಅಂತ ಹೇಳಿದೆ ಅಷ್ಟೇ’: ವಿವಾದದ ಬಳಿಕ ಸ್ಪಷ್ಟನೆ ಕೊಟ್ಟ ಸಿಎಂ
ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈಗ ತಾನೇ ಎಲ್ಲಾ ವಿಚಾರಗಳಲ್ಲೂ ಸಮೃದ್ಧವಾಗಿರುವ ಕಾಶ್ಮೀರವನ್ನು ಹಳೆಯ ಪರಿಸ್ಥಿತಿಗೆ ತಂದು ನಿಲ್ಲಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಕಾಶ್ಮೀರದಲ್ಲಿ ಶಾಂತಿ ಮರಳುತ್ತಿರುವ ಸಮಯದಲ್ಲಿ ಶಾಲಾ ಕಾಲೇಜುಗಳಲ್ಲಿ ಚೈತನ್ಯವಿತ್ತು. ಈ ಅಭಿವೃದ್ಧಿ ಜಮ್ಮು ಕಾಶ್ಮೀರದ ಪ್ರಗತಿಯನ್ನು ಶತ್ರುಗಳಿಗೆ ಸಹಿಸಲು ಆಗುತ್ತಿಲ್ಲ. ಭಯೋತ್ಪಾದಕರು ಮತ್ತೊಮ್ಮೆ ಕಾಶ್ಮೀರವನ್ನು ನಾಶಮಾಡಲು ಬಯಸುತ್ತಾರೆ ಎಂದರು.
ಇದನ್ನೂ ಓದಿ :ಪರಮಾಣು ಬಾಂಬ್ ಪ್ರದರ್ಶನಕ್ಕಿಲ್ಲ; ಅಣುಬಾಂಬ್ ಬೆದರಿಕೆ ಹಾಕಿದ ಪಾಕ್ ಸಚಿವ
ಜಾಗತಿಕ ನಾಯಕರು ಈ ಕೃತ್ಯವನ್ನು ಖಂಡಿಸಿ ನನಗೆ ಕರೆ ಮಾಡಿದ್ದಾರೆ, ಪತ್ರಗಳನ್ನು ಬರೆದಿದ್ದಾರೆ, ಸಂದೇಶಗಳನ್ನು ಕಳುಹಿಸಿದ್ದಾರೆ. ಈ ಘೋರ ಭಯೋತ್ಪಾದಕ ದಾಳಿಯನ್ನು ಎಲ್ಲರೂ ಬಲವಾಗಿ ಖಂಡಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟಕ್ಕೆ ಇಡೀ ಜಗತ್ತು ನಮ್ಮ ಹಿಂದೆ ನಿಂತಿದೆ ಎಂದು ತಿಳಿಸಿದರು.