ಜೈಪುರ: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೇಶದೆಲ್ಲಡೆ ಭದ್ರತಾ ಪಡೆಗಳು ಕಾರ್ಯಪ್ರವೃತ್ತವಾಗಿದ್ದು. ಇದರ ಬೆನ್ನಲ್ಲೇ ಭಾರತೀಯ ಭದ್ರತಾ ಮತ್ತು ಗುಪ್ತಚರ ಪಡೆಗಳು ಪಾಕಿಸ್ತಾನದ ಐಎಸ್ಐಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನದ ಜೈಸಲ್ಮೇರ್ ನಿವಾಸಿ ಪಠಾಣ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ.
ನಿನ್ನೆ (ಮೇ.01) ಜೈಪುರದಲ್ಲಿ ಗುಪ್ತಚರ ಅಧಿಕಾರಿಗಳು ಬೇಹುಗಾರಿಕೆ ನಡೆಸುತ್ತಿದ್ದ ಈತನನ್ನು ಬಂಧಿಸಿದ್ದು, ಈತ 2013 ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದನು ಎಂದು ತಿಳಿದು ಬಂದಿದೆ. ಇನ್ನು ಈತ ಪಾಕಿಸ್ತಾನದ ಐಎಸ್ಐ ಜೊತೆ ನಿಕಟವಾಗಿ ಕೆಲಸ ಮಾಡುತ್ತಿದ್ದು, ಸೂಕ್ಷ್ಮ ಮಿಲಿಟರಿ ಮತ್ತು ಗಡಿ ಸಂಬಂಧಿತ ಮಾಹಿತಿಯನ್ನು ಒದಗಿಸುತ್ತಿದ್ದರು ಎಂದು ವರದಿಯಾಗಿದೆ.
ಇದನ್ನೂ ಓದಿ :ಸೋನು ನಿಗಮ್ ಒಬ್ಬ ಸಾಂಸ್ಕೃತಿಕ ಭಯೋತ್ಪಾದಕ: ಕರವೇ ನಾರಯಣ ಗೌಡ
ಗುಪ್ತಚರ ಮೂಲಗಳ ಪ್ರಕಾರ, ಖಾನ್ 2013 ರ ನಂತರವೂ ನಿಯಮಿತವಾಗಿ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದರು, ಐಎಸ್ಐ ಅಧಿಕಾರಿಗಳೊಂದಿಗೆ ನೇರ ಸಂವಹನ ಮಾರ್ಗವನ್ನು ಕಾಯ್ದುಕೊಳ್ಳುತ್ತಿದ್ದರು ಮತ್ತು ಭಾರತದ ರಕ್ಷಣಾ ಸ್ಥಾನಗಳಿಗೆ ಸಂಬಂಧಿಸಿದ ನಿರ್ಣಾಯಕ ಡೇಟಾವನ್ನು ಹಂಚಿಕೊಳ್ಳುತ್ತಿದ್ದನು, ವಿಶೇಷವಾಗಿ ಜೈಸಲ್ಮೇರ್ ಅಂತರರಾಷ್ಟ್ರೀಯ ಗಡಿಯ ಸುತ್ತಲೂ ಈ ಬೇಹುಗಾರಿಕೆ ನಡೆಸುತ್ತಿದ್ದನು ಎಂದು ಆರೋಪಿಸಲಾಗಿದೆ.