ಜಮ್ಮು-ಕಾಶ್ಮೀರ : ಪಹಲ್ಗಾಮ್ನಲ್ಲಿ ನಡೆದ ಉಗ್ರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಚರಣೆ ಕೈಗೊಂಡಿದ್ದು. ಇದರಿಂದಾಗಿ ಎರಡು ದೇಶದ ಗಡಿಗಳಲ್ಲಿ ತೀವ್ರ ಉದ್ವಿಘ್ನತೆ ಏರ್ಪಟ್ಟಿದೆ. ಇದರ ನಡುವೆ ಪಾಕಿಸ್ತಾನದ ಫಿರಂಗಿ ದಾಳಿಗೆ ಜಮ್ಮು ಕಾಶ್ಮೀರದ ಹಿರಿಯ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ನಿನ್ನೆ ರಾತ್ರಿ (ಮೇ.09) ಪಾಕಿಸ್ತಾನ ಭಾರತದ ಮೇಲೆ ಡ್ರೋನ್ ಮತ್ತು ಪ್ರೋಜಕ್ಟೈಲ್ಗಳ ಮೂಲಕ ಸರಣಿ ದಾಳಿ ನಡೆಸಿದ್ದು. ಇದಕ್ಕೆ ಪ್ರತಿಯಾಗಿ ಭಾರತವೂ ಕೂಡ ವಾಯುದಾಳಿ ಮೂಲಕ ಪಾಕಿಗಳಿಗೆ ಉತ್ತರಿಸಿದೆ. ಆದರೆ ಇಂದು ಮುಂಜಾನೆ ಪಾಕಿಸ್ತಾನ ನಡೆಸಿದ ಫಿರಂಗಿ ದಾಳಿಗೆ ಜಮ್ಮು-ಕಾಶ್ಮೀರದ ಹಿರಿಯ ಅಧಿಕಾರಿ ರಾಜ್ ಕುಮಾರ್ ಥಾಪಾ (55) ಮೃತಪಟ್ಟಿದ್ದು. ಜೊತೆಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ :ಪಾಕಿಸ್ತಾನದ ಸೇನಾ ನೆಲೆ ಮತ್ತು ಡ್ರೋನ್ ಲಾಂಚ್ಪ್ಯಾಡ್ಗಳನ್ನು ಧ್ವಂಸಗೊಳಿಸಿದ ಭಾರತ
ರಜೌರಿಯ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಜ್ ಕುಮಾರ್ ಥಾಪಾ (55) ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, ಸಾಮಾಜಿಕ ಜಾಲತಾಣ ಎಕ್ಷ್ನಲ್ಲಿ ಸಂತಾಪ ವ್ಯಪ್ತಪಡಿಸಿದ್ದು. ಅವರೊಟ್ಟಿಗೆ ಕಳೆದ ಸಮಯವನ್ನು ನೆನಪಿಸಿಕೊಂಡಿದ್ದಾರೆ.
ಈ ಕುರಿತು ಒಮರ್ ಅಬ್ದುಲ್ಲಾ ತಮ್ಮ ಎಕ್ಷ್ ಖಾತೆಯಲ್ಲಿ ಬರೆದುಕೊಂಡಿದ್ದು ‘ರಾಜೌರಿಯಿಂದ ಆಘಾತಕಾರಿ ಸುದ್ದಿ ಬಂದಿದೆ. ನಾವು ಜಮ್ಮು-ಕಾಶ್ಮೀರದ ಆಡಳಿತ ಸೇವೆಗೆ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಮತ್ತು ನಾನು ಅಧ್ಯಕ್ಷತೆ ವಹಿಸಿದ್ದ ಆನ್ಲೈನ್ ಸಭೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ:ಪಾಕ್ನಿಂದ ಶೆಲ್ ದಾಳಿ: ಸ್ಥಳಾಂತರಗೊಂಡ ಜನರೊಂದಿಗೆ ಕ್ರಿಕೆಟ್ ಆಡಿದ ಒಮರ್ ಅಬ್ದುಲ್ಲಾ
ಇಂದು ಅಧಿಕಾರಿಯ ನಿವಾಸದ ಮೇಲೆ ಪಾಕ್ ಶೆಲ್ ದಾಳಿ ನಡೆದಿದ್ದು. ಈ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ಶ್ರೀ ರಾಜ್ ಕುಮಾರ್ ಥಾಪ್ಪಾ ಸಾವನ್ನಪ್ಪಿದರು. ಈ ಭೀಕರ ಜೀವಹಾನಿಯಿಂದ ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಮುಖ್ಯಮಂತ್ರಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ.