Thursday, May 22, 2025

ರಾಮನಗರ ಹೆಸರು ಬದಲಾವಣೆಗೆ ಕ್ಯಾಬಿನೆಟ್ ಒಪ್ಪಿಗೆ: ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ

ರಾಮನಗರ : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್​ ಸಭೆಯಲ್ಲಿ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದ್ದು. ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ.

ಸಚಿವ ಸಂಪುಟ ಸಭೆ ಮುಗಿದ ನಂತರ ಮಾಧ್ಯಮ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿಕೆ. ಶಿವಕುಮಾರ್​ “ರಾಮನಗರ ಜಿಲ್ಲೆಗೆ ಇವತ್ತಿನಿಂದ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಸಲು ತೀರ್ಮಾನ ಆಗಿದೆ.  ರಾಮನಗರ,ಹೊಸಕೋಟೆ ಎಲ್ಲವೂ ಮೊದಲು ಬೆಂಗಳೂರು ಅಂತಿತ್ತು, ನಂತರ ಇವುಗಳನ್ನ ಬೇರ್ಪಡಿಸಿದರು ಎಂದು ಹೇಳಿದರು. ಇದನ್ನೂ ಓದಿ :‘ಮೊದಲು ಇಲ್ಲಿಂದ ಎದ್ದು ಹೊರಹೋಗು’: ವರದಿಗಾರನ ಮೇಲೆ ಟ್ರಂಪ್​ ಗರಂ

ಜಿಲ್ಲೆ ಹೆಸರು ಬದಲಿಸಲು ಕೇಂದ್ರದ ಒಪ್ಪಿಗೆ ಬೇಕಿಲ್ಲ..!

ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಕೆಲ ತಿಂಗಳ ಹಿಂದೆ ತಿರಸ್ಕರಿಸಿತ್ತು. ಈ ಕುರಿತು ಮಾತನಾಡಿದ ಡಿಕೆಶಿ ‘ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ಕೇಂದ್ರದ ಒಪ್ಪಿಗೆಯ ಅವಶ್ಯಕತೆ ಇಲ್ಲ. ಈ ವಿಷಯವನ್ನು ಕೇಂದ್ರಕ್ಕೆ ತಿಳಿಸಬೇಕಿತ್ತು, ಅದನ್ನ ನಾವು ತಿಳಿಸಿದ್ದೇವೆ. ಈ ಹಿಂದೆಯೂ ಗದಗ, ಚಾಮರಾಜ ನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವಾಗಲೂ ಕೇಂದ್ರ ಸರ್ಕಾರದ ಬಳಿ ಕೇಳಿರಲಿಲ್ಲ. ರಾಮನಗರ ಅಂತ ಹೆಸರು ಇಟ್ಟಾಗಲು ಕೇಳಿಲ್ಲ ಎಂದು ಹೇಳಿದರು. ಇದನ್ನೂ ಓದಿ :ರಾಕೇಶ್​ ಪೂಜಾರಿ ನೆನೆದು ‘ಭರ್ಜರಿ ಬ್ಯಾಚುಲರ್ಸ್’ ವೇದಿಕೆ ಮೇಲೆ ಕಣ್ಣೀರಿಟ್ಟ ಕಲಾವಿದರು

ಇನ್ನು ರಾಮನಗರ ಹೆಸರು ಬದಲಾವಣೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಜೆಡಿಎಸ್ ಪಕ್ಷ ವಿರೋಧಿಸುತ್ತಿದ್ದು. ಹೆಸರು ಬದಲಾವಣೆಯಿಂದ ಅಭಿವೃದ್ದಿ ಆಗುವುದಿಲ್ಲ ಎಂದು ಟೀಕಿಸಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿ ಡಿಕೆ ಶಿವಕುಮಾರ್​ ‘ಅವರು ಕೆಲ ಸಮಯ ಕಾದು ನೋಡಲಿ’ ಎಂದು ಉತ್ತರಿಸಿದರು.

RELATED ARTICLES

Related Articles

TRENDING ARTICLES