ಮೈಸೂರು : ಶಿರಾ, ಆರ್ ಆರ್ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್ ಅವರ ಗೂಂಡಾ ರಾಜಕಾರಣ ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರಿನ ಶಿರಾ ಉಪ ಚುನಾವಣೆಯಲ್ಲಿ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ. ಆದರೆ ಅಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆಯೆಂದು ವಿಶ್ವಾಸದ ನುಡಿಗಳನ್ನಾಡಿದರು.
ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಗುದ್ದಾಟ ನಡೆಸುತ್ತಿದೆ. ಅಧಿಕಾರದಲ್ಲಿ ಇದ್ದಾಗಲೂ ಇಲ್ಲದಿರುವಾಗಲೂ ಕಾಂಗ್ರೆಸ್ ನಾಯಕರು ಬಡಿದಾಟ ಮಾಡ್ತಾರೆ. ಇದು ಕಾಂಗ್ರೆಸ್ ಉಳಿವಿಗಾಗಿ ನಡೆಯುತ್ತಿರೋ ಚುನಾವಣೆ. ಆದ್ದರಿಂದ ಅವರ ಗುದ್ದಾಟ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.