Tuesday, October 29, 2024

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ  ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್​ ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರಿನ ಶಿರಾ ಉಪ ಚುನಾವಣೆಯಲ್ಲಿ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ. ಆದರೆ ಅಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆಯೆಂದು ವಿಶ್ವಾಸದ ನುಡಿಗಳನ್ನಾಡಿದರು.

ಕಾಂಗ್ರೆಸ್​ ಅಸ್ತಿತ್ವಕ್ಕಾಗಿ ಗುದ್ದಾಟ ನಡೆಸುತ್ತಿದೆ. ಅಧಿಕಾರದಲ್ಲಿ ಇದ್ದಾಗಲೂ ಇಲ್ಲದಿರುವಾಗಲೂ ಕಾಂಗ್ರೆಸ್ ನಾಯಕರು ಬಡಿದಾಟ ಮಾಡ್ತಾರೆ. ಇದು ಕಾಂಗ್ರೆಸ್​​ ಉಳಿವಿಗಾಗಿ ನಡೆಯುತ್ತಿರೋ ಚುನಾವಣೆ. ಆದ್ದರಿಂದ ಅವರ ಗುದ್ದಾಟ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.

RELATED ARTICLES

Related Articles

TRENDING ARTICLES