Friday, September 20, 2024

ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ: ಸಿಎಂ ಬೊಮ್ಮಾಯಿ

ಬೆಂಗಳೂರು : ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ಆ‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಇ.ಡಿ. ವಿಚಾರಣೆ ಎದುರಿಸುತ್ತಿದ್ದಾರೆ. ಮಾಜಿ ಅಧ್ಯಕ್ಷ ಇ.ಡಿ. ವಿಚಾರಣೆಗೆ ಒಳಗಾಗಿದ್ದಾರೆ ಎಂದರು.

ಪಕ್ಷದ ರಾಜ್ಯಾಧ್ಯಕ್ಷ ಆಗಾಗ್ಗೆ ವಿಚಾರಣೆ, ಕೋರ್ಟ್​ಗೆ ಹೋಗಿ ಬರುತ್ತಿದ್ದಾರೆ.ತಮ್ಮ ಭ್ರಷ್ಟತನ‌ ಮುಚ್ಚಿಕೊಳ್ಳಲು‌ ಬಿಜೆಪಿ ಸರ್ಕಾರದ ಮೇಲೆ‌ ಆಧಾರರಹಿತ ಭ್ರಷ್ಟಾಚಾರ ಆರೋಪ ಹೊರಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಿಡಿಕಾರಿದರು.

ದೊಡ್ಡಬಳ್ಳಾಪುರದಲ್ಲಿ ರಾಜ್ಯ ಬಿಜೆಪಿ ಗುರುವಾರ ಹಮ್ಮಿಕೊಂಡಿರುವ ಜನೋತ್ಸವವನ್ನು ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರೋತ್ಸವ ಎಂದು ಅಣಕವಾಡಿರುವುದಕ್ಕೆ ಸಿಎಂ ಬೊಮ್ಮಾಯಿ‌ ಆರ್​.ಟಿ. ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ‌ ಪ್ರತಿಕ್ರಿಯಿಸಿದರು.ಈ‌ ಹಿಂದೆ ಐದು ವರ್ಷಗಳ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಎಸಗಿದ್ದಕ್ಕಾಗಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ತಕ್ಕಪಾಠ ಕಲಿಸಿದರು. ಆದರೂ ಕಾಂಗ್ರೆಸ್​ಗೆ ಬುದ್ಧಿ ಬಂದಂತಿಲ್ಲ. ಮುಂದಿನ‌ ಚುನಾವಣೆಯಲ್ಲೂ‌ ಜನರು‌ ಮತ್ತೊಮ್ಮೆ ಸೋಲಿಸಿ ಮೂಲೆಗೆ ಸೇರಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES