Sunday, October 27, 2024

ಕರ್ನಾಟಕದಲ್ಲಿ ಕೊವಿಡ್​ ಹೆಚ್ಚಳ : ಕೇಂದ್ರ ಸರ್ಕಾರ ಎಚ್ಚರಿಕೆ

ಬೆಂಗಳೂರು : ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದಕ್ಕೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ.

ಕರ್ನಾಟಕ, ಕೇರಳ, ತಮಿಳುನಾಡು, ದೆಹಲಿ, ಮಹಾರಾಷ್ಟ್ರ, ಒಡಿಶಾ ಹಾಗೂ ತೆಲಂಗಾಣ ಸರ್ಕಾರಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್‌ ಭೂಷಣ್‌, ಕೋವಿಡ್‌ ಪ‍್ರಕರಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಕೋವಿಡ್‌ ಲಸಿಕಾಕರಣಕ್ಕೆ ವೇಗ ನೀಡಬೇಕು ಎಂದೂ ಹೇಳಿದ್ದಾರೆ. ಮುಂಬರುವ ತಿಂಗಳುಗಳಲ್ಲಿ ಹಬ್ಬಗಳ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಜನರ ದಟ್ಟಣೆ ಹೆಚ್ಚಾಗಲಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಹಾಗೂ ಅಂತರ್‌ ರಾಜ್ಯ ಪ್ರವಾಸಗಳನ್ನು ಕೈಗೊಳ್ಳಲಿದ್ದಾರೆ. ಇದರಿಂದ ಸೋಂಕು ಪ್ರಸರಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಪತ್ರದಲ್ಲಿ ಎಚ್ಚರಿಸಿದ್ದಾರೆ.

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ ಕುಮಾರ್ ಅವರಿಗೆ ಬರೆದಿರುವ ಪತ್ರದಲ್ಲಿ, ‘ಕಳೆದ ಒಂದು ತಿಂಗಳಿನಿಂದ ಕರ್ನಾಟಕದಲ್ಲಿ ನಿತ್ಯ ಸರಾಸರಿ 1,355 ಪ್ರಕರಣಗಳು ದಾಖಲಾಗುತ್ತಿವೆ. ಆಗಸ್ಟ್‌ 5ರಂದು ಗರಿಷ್ಠ 1,992 ಪ್ರಕರಣಗಳು ಪತ್ತೆಯಾಗಿವೆ. ದೇಶದ ಒಟ್ಟು ಪ್ರಕರಣಗಳ ಪತ್ತೆ ಪ್ರಮಾಣದಲ್ಲಿ ರಾಜ್ಯದ ಪಾಲು ಶೇ 10ರಷ್ಟು ಇದೆ. ವಾರದ ಪಾಸಿಟಿವಿಟಿ ಪ್ರಮಾಣ ಶೇ 5.30ರಿಂದ ಶೇ 6.8ಕ್ಕೆ ಏರಿಕೆಯಾಗಿದೆ. ಹೀಗಾಗಿ, ಪ್ರಕರಣಗಳ ಬಗ್ಗೆ ನಿಗಾ ವಹಿಸಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.

RELATED ARTICLES

Related Articles

TRENDING ARTICLES