Sunday, May 19, 2024

ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಏಕೆ: ಮತ್ತೆ ಸಮರ್ಥನೆ ಮಾಡಿಕೊಂಡ ಸಿದ್ದರಾಮಯ್ಯ

ಬೆಂಗಳೂರು: ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್ ಫೋಟೋ ಏಕೆ ವಿಚಾರ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ ತಮ್ಮ ಹೇಳಿಕೆ ಸಮರ್ಥನೆ ಮಾಡಿಕೊಂಡಿದ್ದಾರೆ.

ಏ ನಡಿಯಪ್ಪ, ಮುಸ್ಲಿಂ ಏರಿಯ ಅಲ್ಲಾ. ಮುಸ್ಲಿಂ ಇರೋ ಕಡೆ ಯಾಕೆ ಫ್ಲೆಕ್ಸ್​ ಏಕೆ ಹಾಕಿದ್ದು ಬೇರೆ ಕಡೆ ಹಾಕಬೋದಿತ್ತು ಅಂದಿದ್ದು ಎಂದು ತಮ್ಮ ಹೇಳೆಕೆಯನ್ನ ಮತ್ತೊಮ್ಮೆ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡರು.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿ ಆರ್​. ಅಶೋಕ್ ಮುಸ್ಲಿಮರು ಇರುವ ಮಾತ್ರಕ್ಕೆ ಅದನ್ನು ಪಾಕಿಸ್ತಾನ ಅಂದುಕೊಂಡಿದ್ದಾರಾ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಗೊಂದಲದಲ್ಲಿದ್ದಾರೆ. ಸಾವರ್ಕರ್ ಫೋಟೋ ಮುಸ್ಲಿಂ ಸಮುದಾಯ ಇರುವ ಕಡೆ ಹಾಕಿದ್ದನ್ನು ಪ್ರಶ್ನಿಸಿದ್ದಾರೆ. ಮುಸ್ಲಿಂ ಏರಿಯಾ ಅಂದರೆ ಅದು ಪಾಕಿಸ್ತಾನಕ್ಕೆ ಸೇರಿದ್ಯಾ ಮುಸ್ಲಿಮರು ಇರೋ ಮಾತ್ರಕ್ಕೆ ಅದನ್ನು ಪಾಕಿಸ್ತಾನ ಅಂದುಕೊಂಡಿದ್ದಾರಾ ಸಿದ್ದರಾಮಯ್ಯ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

RELATED ARTICLES

Related Articles

TRENDING ARTICLES