Monday, October 28, 2024

ಮಲೆನಾಡಿನಲ್ಲಿ ಮಳೆ ಮುಂದುವರಿಕೆ

ಬೆಂಗಳೂರು : ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ ಮಳೆ ಇದೀಗ ಕೊಂಚ ಬಿಡುವು ನೀಡಿದ್ದು, ಒಂದೆರಡು ಜಿಲ್ಲೆಗಳಲ್ಲಿ ಮಾತ್ರ ಎಂದಿನಂತೆ ಮಳೆ ಮುಂದುವರೆಯಲಿದೆ.

ಬೆಂಗಳೂರು, ಕಲಬುರಗಿ, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಬೀದರ್, ಹಾಸನ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆಯಿಂದ 6 ದಿನಗಳ ಕಾಲ ಮಳೆಯಾಗಲಿದ್ದು, ವಿಜಯಪುರದಲ್ಲಿ ಮೂರು ದಿನ ಮಳೆಯಾಗಲಿದೆ. ಹಾಗೆಯೇ ಬೆಳಗಾವಿ, ಕೊಡಗು, ರಾಮನಗರ, ಗದಗ, ವಿಜಯಪುರ, ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳಲ್ಲೂ ಬಿಸಿಲು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

RELATED ARTICLES

Related Articles

TRENDING ARTICLES